August 2011 archive

ಜನ ಲೋಕಪಾಲ್ ಒಂದೇ ಸಾಲದು; ಸರ್ವರಿಗೂ ನೈಜ ಅಧಿಕಾರ ದೊರೆಯಲಿ

[dropcap]ನಾ[/dropcap]ವಿಂದು ಬಹು ದೊಡ್ಡ ಜನಾಂದೋಲನವನ್ನು ಕಾಣುತ್ತಿದ್ದೇವೆ. ಇದು ಪೂರ್ಣ ಸ್ವಾತಂತ್ರ್ಯದ ಎರಡನೇ ಆಂದೋಲನ ಎಂದು ಈಗಾಗಲೇ ಕರೆಯಲ್ಪಟ್ಟಿದೆ. ಈ ಆಂದೋಲನಕ್ಕೆ ದುರಾಳಿತ ನಡೆಸಿದ ಕಾಂಗ್ರೆಸ್ ಪಕ್ಷವು  ಕಾರಣವಾಗಿದ್ದರೆ ಅದರ ದುರ್ಲಾಭವನ್ನು ಪಡೆಯಲು ಅದಕ್ಕಿಂತಲೂ ಭ್ರಷ್ಠವಾದ, ಬಂಡವಾಳವಾದಿ ಪ್ರತಿಗಾಮಿ ಪಕ್ಷಗಳಾದ ಭಾಜಪ ಮತ್ತು ಸಂಘಪರಿವಾರಗಳು ಹೊಂಚುಹಾಕುತ್ತಿರುವುದನ್ನು ಕಾಣುತ್ತೇವೆ. ಅಣ್ಣಾ ಹಜಾರೆಯವರ ತಂಡದವರು ಸಚ್ಚಾರಿತ್ರರು ಎಂದಾದರೂ ಜನಾಂದೋಲನವು ಯಶಸ್ವಿಯಾಗಿ ಅಧಿಕಾರವು ಪ್ರತಿಗಾಮಿ ಪಕ್ಷಗಳ ಹಿಡಿತಕ್ಕೊಳಗಾದರೆ  ಜನರಿಗೆ ಜನಲೋಕಪಾಲ ಮಸೂದೆಯಿಂದ  ಎಷ್ಟು ಒಳಿತು ಆಗಬಲ್ಲುದೋ ಅದರ ಶತ ಪಾಲು ಸಂಕಷ್ಟಗಳು ಬಂದೊದಗಿ …

Continue reading

ಉರುಳು ಸೇವೆಯ ಬದಲಿಗೆ ಜನಸೇವೆ ಮಾಡಿ

[dropcap]ಕಾಂ[/dropcap]ಗ್ರೆಸ್ ಅಧ್ಯಕ್ಷೆ  ಶ್ರೀಮತಿ ಸೋನಿಯಾ ಗಾಂಧಿ, ಅಮೆರಿಕಾದ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಪರಿಣತ ತಜ್ಞರ ಚಿಕಿತ್ಸೆಯನ್ನು ಪಡೆಯುತ್ತಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆ. ಅವರಲ್ಲಿ ಸದ್ಭಾವನೆಯುಳ್ಳವರೆಲ್ಲರೂ ಅವರು ಶೀಘ್ರ ಗುಣಮುಖರಾಗಲಿ ಎಂಬ ಕಳಕಳಿಯನ್ನು ಹೊಂದಿರುವುದೂ ಪ್ರಕಟವಾಗಿದೆ. ಅದು ಸಹಜವೂ ಹೌದು. ಅಮೆರಿಕಾದ ತಜ್ಞ ವೈದ್ಯರು ಸೂಕ್ತ ಚಿಕಿತ್ಸೆಯನ್ನು ನೀಡುವುದರಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಶ್ರೀಮತಿ ಸೋನಿಯಾ ಗಾಂಧಿಯವರಾಗಲಿ, ಚಿಕಿತ್ಸೆಯನ್ನು ನೀಡುವ ವೈದ್ಯರಾಗಲಿ ಯಾವುದೇ ದೇವಾಲಯಗಳಲ್ಲಿ, ಇಗರ್ಜಿ, ಮಸೀದಿಗಳಲ್ಲಿ ಯಾವುದೇ ತರದ ಹರಕೆಯನ್ನಾಗಲೀ ಪ್ರಾರ್ಥನೆಯನ್ನಾಗಲೀ ಮಾಡಿಕೊಂಡ ವರದಿ ಪ್ರಕಟವಾಗಲಿಲ್ಲ. ವೈದ್ಯರು ವೈಜ್ಞಾನಿಕ ಚಿಕಿತ್ಸಾ ಕ್ರಮಗಳನ್ನು ಮಾತ್ರ …

Continue reading

ಬಿನಾಯಕ್ ಸೆನ್ ಅವರನ್ನು ಬೆಂಬಲಿಸಿ

[dropcap]ಮಾ[/dropcap]ನವ ಹಕ್ಕುಗಳ ಹೋರಾಟಗಾರ ಡಾ. ಬಿನಾಯಕ್‌ಸೇನ್ ಅವರಿಗೆ ಚತ್ತೀಸ್‌ಘಡ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದ್ದುದಕ್ಕೆ ವಿರುದ್ದವಾಗಿ ದೇಶದಾದ್ಯಂತ ಖಂಡನೆಗಳು ವ್ಯಕ್ತವಾಗಿವೆ. ಈ ಶಿಕ್ಷೆಯ ವಿರುದ್ಧ ಅವರ ಮೇಲ್ಮನವಿಯನ್ನು ಉಚ್ಛ ನ್ಯಾಯಾಲಯವೂ ತಿರಸ್ಕರಿಸಿತ್ತು. ಆ ಬಗ್ಗೆ ಸರ್ವೋಚ್ಛ ನ್ಯಾಯಾಲಯಕ್ಕೆ ಅವರು ನೀಡಿದ್ದ ಜಾಮೀನು ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಂಡು ಅವರಿಗೆ ಜಾಮೀನು ನೀಡಿದೆ ಮಾತ್ರವಲ್ಲದೆ ಅವರು ಯಾವುದೇ ದೇಶದ್ರೋಹದ ಕೆಲಸವನ್ನು ಮಾಡಿರುವುದು ತೋರುವುದಿಲ್ಲ ಎಂದು ಪರಿಗಣಿಸಿ ಅವರನ್ನು ತಕ್ಷಣ ಜೈಲಿನಿಂದ ಬಿಡುಗಡೆ ಮಾಡಬೇಕೆಂದು ಆಜ್ಞಾಪಿಸಿರುವುದು ಮಾನವ ಹಕ್ಕುಗಳ ಹೋರಾಟಗಾರರೆಲ್ಲರ ಪ್ರಶಂಸೆಗೆ …

Continue reading