ಮಾರ್ಚ್ 23, 2010 ರ ವಾರ್ತಾಭಾರತಿಯಲ್ಲಿ ಪ್ರಕಟಿತ ಲೇಖನ) [dropcap]ನ[/dropcap]ಮ್ಮ ಸಮಾಜದ ಮನೋಸ್ಥಿತಿಯ ಬಗೆಗೆ ಜ್ಞಾನಪೀಠ ಪ್ರಶಸ್ತಿ ವಿಜೇತ ಶಿವರಾಮ ಕಾರಂತರು ಒಂದು ವಿಶ್ಲೇಷಣೆಯನ್ನು ನೀಡಿ ದ್ದಾರೆ; ‘ಹುಚ್ಚ್ಚು ಮನಸ್ಸಿನ ಹತ್ತು ಮುಖಗಳು’ ಎಂದು, ಅದನ್ನೇ ಒಂದು ಸಂಸ್ಕತ ಶ್ಲೋಕದ ಮೂಲಕ ಅವರು ಚಿತ್ರಿಸಿದ್ದಾರೆ. ‘ಮರ್ಕಟಸ್ಯ ಸುರಾಪಾನಂ ಮದ್ಯೇ ವಶ್ಚೀಕ ತಾಡನಂ, ತನ್ಮದ್ಯೆ ಭೂತ ಸಂಚಾರಂ, ಯದ್ವಾ ತದ್ವಾ ಭವಿಷ್ಯತೀ’ ಹೆಂಡ ಕುಡಿದ ಮಂಗನಿಗೆ ಚೇಳು ಕಡಿಯು ತ್ತದೆ. ಭೂತ ಸಂಚಾರ ಆಗುತ್ತದೆ. ಮತ್ತೆ ನಡೆಯುವುದು ಏನೇನೋ …
March 2010 archive
Mar 16
ಪರಭಾರೆ ಇಲ್ಲ; ಸ್ವಾಗತಾರ್ಹ ಆದರೆ ಎಚ್ಚರ ಇರಲಿ
(ಬರೆದದ್ದು: ಮಾರ್ಚ್ 16, 2010) ವಾರ್ತಾಭಾರತಿಯಿಂದ [dropcap]ಇ[/dropcap]ಡೀ ರಾಜ್ಯದ ಪ್ರಾಜ್ಞರನ್ನು ಮತ್ತು ಸಾಮಾನ್ಯ ಜನರನ್ನು ಕಳೆದ ಕೆಲವು ದಿನಗಳಿಂದ ಪ್ರತಿಭಟನೆಗೆ ಪ್ರಚೋದಿಸಿದ್ದ ಹಂಪಿ ವಿವಿಯ ಭೂಮಿ ಪರ ಭಾರೆಯ ಪ್ರಶ್ನೆಯನ್ನು ಕೈ ಬಿಡಲಾಗಿದೆ ಎಂದು ಮುಖ್ಯ ಮಂತ್ರಿಗಳು ಘೋಷಿಸಿರುವುದು ಸಮಾಧಾನ ತಂದಿದೆ. ಆದರೆ ಇದು ಕೇವಲ ಹೇಳಿಕೆಯಾಗಿ ಉಳಿಯಬಾರದು. ಕಾರ್ಯತಃ ವಿಜಯನಗರ ಸಾಮ್ರಾಜ್ಯ ಪುನಶ್ಚೇತನ ಪ್ರತಿಷ್ಠಾನದ ಹೆಸರಿನಲ್ಲಿ ಬಳ್ಳಾರಿ ಜಿಲ್ಲೆಯ ಗಣಿ ಭೂಮಿ ಕಬಳಿಕೆದಾರರು ಸರಕಾರದ ರಕ್ಷಣೆಯಲ್ಲಿ ಅಮೂಲ್ಯ ನೈಸರ್ಗಿಕ ಸಂಪತ್ತನ್ನು, ಅರಣ್ಯ ಭೂಮಿ ಮತ್ತು ಕಷಿ …