Category: Articles : ಬರಹಗಳು

17ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಶುಭಕಾಮನೆಗಳು

(ಬರೆದದ್ದು ಜನವರಿ 10, 2012) ಮಾನ್ಯ ಜಿಲಾಧಿಕಾರಿಗಳು, ದ ಕ ಜಿಲ್ಲೆ, ಮಂಗಳೂರು. ಇವರಿಗೆ ಮಾನ್ಯರೇ, ವಿಷಯ: 17ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಶುಭಕಾಮನೆಗಳು ತಮ್ಮ ಆಶ್ರಯದಲ್ಲಿ ಇದೇ ತಿಂಗಳ ದಿ.12 ರಿಂದ 16 ರವರೆಗೆ ಜರುಗುವ 17ನೇಯ ರಾಷ್ಟ್ರೀಯ ಯುವಜನೋತ್ಸದಲ್ಲಿ ಪಾಲ್ಗೊಳ್ಳಲು ತಾವು ನನಗೆ ಕಳುಹಿಸಿದ ಆಮಂತ್ರಣವನ್ನು ಕೃತಜ್ಞತಾ ಪೂರ್ವಕವಾಗಿ ಸ್ವೀಕರಿಸುತ್ತೇನೆ. ಅನಾರೋಗ್ಯದ ನಿಮಿತ್ತ ಸದರಿ ಉತ್ಸವಕ್ಕೆ ಖುದ್ದಾಗಿ ಹಾಜರಾಗಲು ಅಸಮರ್ಥನಾದುದರಿಂದ ತಮ್ಮ ಕಾರ್ಯಕ್ಕೆ ಈ ಶುಭಕಾಮನೆಗಳನ್ನು ಕಳುಹಿಸುತ್ತಿದ್ದೇನೆ. ನಮ್ಮ ಯುವಜನರು ದೇಶದ ಪ್ರಗತಿಪರ, ರಚನಾತ್ಮಕ ಚಟುವಟಿಕೆಗಳಲ್ಲಿ …

Continue reading

ರಷ್ಯಾದಲ್ಲಿ ಭಗವದ್ಗೀತೆಯ ವಿವಾದ

ಭಗವದ್ಗೀತೆಯ ಬಗ್ಗೆ ಎದ್ದಿರುವ ವಿವಾದದ ಕುರಿತು 2 ಮಾತುಗಳು: (ಬರೆದದ್ದು: ದಿಸೆಂಬರ್ 27, 2011) [dropcap]ರ[/dropcap]ಷ್ಯದಲ್ಲಿ ಭಗವದ್ಗೀತೆ  ರಷ್ಯನ್ ಭಾಷೆಯಲ್ಲಿ ಅನುವಾದಿಸಿ ಪ್ರಕಟಗೊಂಡಿದ್ದು, ಅದರಲ್ಲಿ  ಹೇಳಲ್ಪಟ್ಟ ಕೆಲವು ಅಪ್ರಿಯ ಬೋಧನೆ, ಹಿಂಸೆ ಮತ್ತು ಜಾತೀಯತೆಯ ಪ್ರತಿಪಾದನೆ ಇತ್ಯಾದಿಗಳಿಗಾಗಿ ಅದನ್ನು ನಿಷೇಧಿಸಲು ಅಲ್ಲಿನ ನ್ಯಾಯಾಲಯದಲ್ಲಿ ಕೆಲವು ನಾಗರಿಕರು ದಾವೆಯನ್ನು ಹೂಡಿದ್ದಾರೆ. ನ್ಯಾಯಾಲಯದ ತೀರ್ಮಾನವನ್ನು ನಿರೀಕ್ಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಮ್ಮ ಕೆಲವು ಬಲ ಪಂಥೀಯ ಮತ್ತು ಧರ್ಮಾಂಧ ಸಂಸದರು ಸಂಸತ್ತಿನಲ್ಲಿ ಒಂದು ಸುಳಿಗಾಳಿಯನ್ನೇ ಎಬ್ಬಿಸಿದ್ದಾರೆ. ಪ್ರಾಮುಖ್ಯವಾದ ಲೋಕಪಾಲ ಮಸೂದೆ, ಆಹಾರ …

Continue reading

ಚುನಾವಣಾ ನಿಯಮಗಳ ಪರಿಷ್ಕರಣೆಯಾಗಲಿ

[dropcap]ಭ್[/dropcap]ರಷ್ಟಾಚಾರದ ವಿರುದ್ಧ ದೇಶದಾದ್ಯಂತ ಜನರು ರೊಚ್ಚಿಗೆದ್ದಿದ್ದಾರೆ ಮತ್ತು ಅದಕ್ಕೆ ಮೂಲ ಕಾರಣ ನಮ್ಮ ಚುನಾವಣಾ ನಿಯಮಗಳು ಎಂಬುದು ದೃಡಪಟ್ಟಿದೆ. ದೇಶದ  ಸಂಪತ್ತನ್ನು ಕೆಲವೇ ವ್ಯಕ್ತಿಗಳು ಭ್ರಷ್ಟಾಚಾರದ ಮೂಲಕ ಕೊಳ್ಳೆ ಹೊಡೆದು ಅದರ ಪ್ರಭಾವದಿಂದ ನಮ್ಮ  ಸರಕಾರ ಹಾಗೂ ಸಮಸ್ತ ಅಧಿಕಾರವನ್ನು ವಶಪಡಿಸಿ ದೇಶದ ಬಹುಪಾಲು ಜನರ ಬದುಕನ್ನೇ ದುಸ್ತರಗೊಳಿಸಿ ಅವರು ಕನಿಷ್ಟ ಜೀವನಾವಶ್ಯಕತೆಗಳಿಗೂ ಪರದಾಡುವ  ಪರಿಸ್ಥಿತಿ ನಿರ್ಮಾಣವಾಗಿದೆ. ಬಂಡವಾಳಶಾಹಿಗಳು ಕೋಟ್ಯಾಂತರ ರೂಪಾಯಿಗಳನ್ನು ಭ್ರಷ್ಟಾಚಾರದ ರೂಪದಲ್ಲಿ ಚುನಾವಣೆಗಳಲ್ಲಿ ಖರ್ಚುಮಾಡಿ, ಅವರ ಪ್ರತಿನಿಧಿಗಳೇ ಚುನಾಯಿತರಾಗಿ ಬರುವಂತೆ ಮಾಡಲು ಸಮರ್ಥರಾಗುತ್ತಾರೆ. ಅವರ …

Continue reading