Author's posts

ಚುನಾವಣಾ ನಿಯಮಗಳ ಪರಿಷ್ಕರಣೆಯಾಗಲಿ

[dropcap]ಭ್[/dropcap]ರಷ್ಟಾಚಾರದ ವಿರುದ್ಧ ದೇಶದಾದ್ಯಂತ ಜನರು ರೊಚ್ಚಿಗೆದ್ದಿದ್ದಾರೆ ಮತ್ತು ಅದಕ್ಕೆ ಮೂಲ ಕಾರಣ ನಮ್ಮ ಚುನಾವಣಾ ನಿಯಮಗಳು ಎಂಬುದು ದೃಡಪಟ್ಟಿದೆ. ದೇಶದ  ಸಂಪತ್ತನ್ನು ಕೆಲವೇ ವ್ಯಕ್ತಿಗಳು ಭ್ರಷ್ಟಾಚಾರದ ಮೂಲಕ ಕೊಳ್ಳೆ ಹೊಡೆದು ಅದರ ಪ್ರಭಾವದಿಂದ ನಮ್ಮ  ಸರಕಾರ ಹಾಗೂ ಸಮಸ್ತ ಅಧಿಕಾರವನ್ನು ವಶಪಡಿಸಿ ದೇಶದ ಬಹುಪಾಲು ಜನರ ಬದುಕನ್ನೇ ದುಸ್ತರಗೊಳಿಸಿ ಅವರು ಕನಿಷ್ಟ ಜೀವನಾವಶ್ಯಕತೆಗಳಿಗೂ ಪರದಾಡುವ  ಪರಿಸ್ಥಿತಿ ನಿರ್ಮಾಣವಾಗಿದೆ. ಬಂಡವಾಳಶಾಹಿಗಳು ಕೋಟ್ಯಾಂತರ ರೂಪಾಯಿಗಳನ್ನು ಭ್ರಷ್ಟಾಚಾರದ ರೂಪದಲ್ಲಿ ಚುನಾವಣೆಗಳಲ್ಲಿ ಖರ್ಚುಮಾಡಿ, ಅವರ ಪ್ರತಿನಿಧಿಗಳೇ ಚುನಾಯಿತರಾಗಿ ಬರುವಂತೆ ಮಾಡಲು ಸಮರ್ಥರಾಗುತ್ತಾರೆ. ಅವರ …

Continue reading

ಅದ್ವಾನಿಯ ರಥಯಾತ್ರೆಯ ಪ್ರಹಸನ

[dropcap]ಆ[/dropcap]ಪರೇಶನ್ ಕಮಲದ ಮೂಲಕ ಅಧಿಕಾರದ ಪೀಠವನ್ನೇರಿದ ಮಾನ್ಯ ಯೆಡ್ಯೂರಪ್ಪನವರು ಏರಿದ್ದ ಪೀಠವನ್ನು ಉಳಿಸಿಕೊಳ್ಳುವುದು ತಮ್ಮ ಹಕ್ಕು ಎಂಬಂತೆ ವರ್ತಿಸುತ್ತಾ ರಾಜ್ಯಪಾಲರು, ಲೋಕಾಯುಕ್ತರು, ನ್ಯಾಯಾಲಯಗಳು ಮುಂತಾದವರನ್ನೆಲ್ಲಾ ಕಡೆಗಣಿಸಿ, ತಮ್ಮ ಅಧಿಕಾರಕ್ಕೆ ಏನೆಲ್ಲಾ ಒಳಪಟ್ಟಿದೆಯೋ ಆ ಎಲ್ಲ ಕ್ರಮಗಳನ್ನು ಕೈಗೊಂಡರೂ ಸಹಾ ಅಧಿಕಾರವನ್ನು ಉಳಿಸಿಕೊಳ್ಳಲಾಗದೆ ಇದೀಗ ನ್ಯಾಯಾಲಯದ ಕಟಕಟೆಯಲ್ಲಿ ನಿಂತು ತನ್ನ ವರ್ತನೆಗೆ ತಕ್ಕ ಉತ್ತರ ನೀಡಬೇಕಾಗಿದೆ. ಅವರ ಜೊತೆಯಲ್ಲೇ ಅವರ ಮಂತ್ರಿಮಂಡಲದಲ್ಲಿ ಮುಖ್ಯ ಖಾತೆಗಳನ್ನು ವಹಿಸಿಕೊಂಡಿದ್ದ  ಜನಾರ್ಧನ ರೆಡ್ಡಿ ಮತ್ತವರ ಸಂಬಂಧಿ ಶ್ರೀನಿವಾಸ ರೆಡ್ಡಿಯವರು ಕರ್ನಾಟಕದಲ್ಲಿ ಎಷ್ಟು ಹಾರಾಡಿ ಕಣ್ಣ ಮುಚ್ಚಾಲೆ …

Continue reading

ಜನ ಲೋಕಪಾಲ್ ಒಂದೇ ಸಾಲದು; ಸರ್ವರಿಗೂ ನೈಜ ಅಧಿಕಾರ ದೊರೆಯಲಿ

[dropcap]ನಾ[/dropcap]ವಿಂದು ಬಹು ದೊಡ್ಡ ಜನಾಂದೋಲನವನ್ನು ಕಾಣುತ್ತಿದ್ದೇವೆ. ಇದು ಪೂರ್ಣ ಸ್ವಾತಂತ್ರ್ಯದ ಎರಡನೇ ಆಂದೋಲನ ಎಂದು ಈಗಾಗಲೇ ಕರೆಯಲ್ಪಟ್ಟಿದೆ. ಈ ಆಂದೋಲನಕ್ಕೆ ದುರಾಳಿತ ನಡೆಸಿದ ಕಾಂಗ್ರೆಸ್ ಪಕ್ಷವು  ಕಾರಣವಾಗಿದ್ದರೆ ಅದರ ದುರ್ಲಾಭವನ್ನು ಪಡೆಯಲು ಅದಕ್ಕಿಂತಲೂ ಭ್ರಷ್ಠವಾದ, ಬಂಡವಾಳವಾದಿ ಪ್ರತಿಗಾಮಿ ಪಕ್ಷಗಳಾದ ಭಾಜಪ ಮತ್ತು ಸಂಘಪರಿವಾರಗಳು ಹೊಂಚುಹಾಕುತ್ತಿರುವುದನ್ನು ಕಾಣುತ್ತೇವೆ. ಅಣ್ಣಾ ಹಜಾರೆಯವರ ತಂಡದವರು ಸಚ್ಚಾರಿತ್ರರು ಎಂದಾದರೂ ಜನಾಂದೋಲನವು ಯಶಸ್ವಿಯಾಗಿ ಅಧಿಕಾರವು ಪ್ರತಿಗಾಮಿ ಪಕ್ಷಗಳ ಹಿಡಿತಕ್ಕೊಳಗಾದರೆ  ಜನರಿಗೆ ಜನಲೋಕಪಾಲ ಮಸೂದೆಯಿಂದ  ಎಷ್ಟು ಒಳಿತು ಆಗಬಲ್ಲುದೋ ಅದರ ಶತ ಪಾಲು ಸಂಕಷ್ಟಗಳು ಬಂದೊದಗಿ …

Continue reading