ಬಿನಾಯಕ್ ಸೇನ್ ಶಿಕ್ಷೆ ಖಂಡನಾರ್ಹ

ಡಾ. ಬಿನಾಯಕ್ ಸೇನ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಸಂದರ್ಭದಲ್ಲಿ ನೀಡಿದ ಪತ್ರಿಕಾ ಪ್ರಕಟಣೆ (ದಿನಾಂಕ: ಜನವರಿ 7, 2011) (ವಾರ್ತಾಭಾರತಿ)

[dropcap]ಚ[/dropcap]ತ್ತೀಸಗಡ ನ್ಯಾಯಾಲಯವು ಇದೇ ಡಿ.24ರಂದು ಮಾನವ ಹಕ್ಕುಗಳ ಪ್ರತಿಪಾದಕ ಮತ್ತು ಹೋರಾಟಗಾರ ಡಾ.ಬಿನಾಯಕ ಸೇನ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿರುವುದು ಭಾರತದ ಘನತೆಗೆ ಮತ್ತು ಪ್ರಜಾಪ್ರಭುತ್ವವಾದಿ ನಿಲುಮೆಗೆ ಕಳಂಕ ತರುವಂಥಾದ್ದು ಮತ್ತು ಮಾನವ ಹಕ್ಕು ವಂಚಿತರಾಗಿರುವ ಲಕ್ಷಾಂತರ ಭಾರತೀಯ ಬಡ ಜನರ ಮೇಲೆ ಸರ್ವಾಧಿಕಾರಿ ದಮನ ಕಾರ್ಯ ನಡೆಸುವ ಆಡಳಿತಾಂಗದ ಕ್ರಮಗಳನ್ನು ನ್ಯಾಯಾಂಗವು ಸಹಾ ಸಮರ್ಥಿಸುವಂಥಾಹದ್ದಾಗಿದೆ. ಇದು ಪ್ರಪಂಚದಲ್ಲೇ ಭಾರತದ ಘನತೆ ಗೌರವಗಳಿಗೆ ಕುಂದು ತರುವಂಥದ್ದಾಗಿದೆ. ಇದನ್ನು ನಾವು ಬಲವಾಗಿ ಖಂಡಿಸಬೇಕಾಗಿದೆ.

ಕಮ್ಯುನಿಸ್ಟ್ ಪಕ್ಷದ ಹಿರಿಯ ಸದಸ್ಯ, ಸ್ವಾತಂತ್ರ್ಯ ಹೋರಾಟಗಾರ, ಮತ್ತು ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೌಕರರ ಮತ್ತು ಕಾರ್ಮಿಕರ ಒಕ್ಕೂಟದ ಹಿರಿಯ ಉಪಾಧ್ಯಕ್ಷನ ನೆಲೆಯಲ್ಲಿ ಈ ಜೀವಾವಧಿ ಶಿಕ್ಷೆಯನ್ನು ನಾನು  ಖಂಡಿಸುತ್ತೇನೆ. ಈ ಬಗ್ಗೆ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೌಕರರ ಮತ್ತು ಕಾರ್ಮಿಕರ ಒಕ್ಕೂಟದ ಕೇಂದ್ರ ಕಾರ್ಯಕಾರಿ ಸಮಿತಿಯು ಒಕ್ಕೊರಳಿನ  ನಿರ್ಣಯವನ್ನು  ಅಂಗೀಕರಿಸಿ ಸರ್ವೋಚ್ಹ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಿಗೆ ಈಗಾಗಲೇ ಮನವಿಯೊಂದನ್ನು ಅರ್ಪಿಸಿದೆ. ಅಲ್ಲದೆ ಭಾರತದ ಎಲ್ಲ ವಿಚಾರವಾದಿಗಳು ಬಿನಾಯಕ ಸೇನರ ಬಿಡುಗಡೆಯಾಗುವುದು ಭಾರತದ ಪ್ರಜಾಪ್ರಭುತ್ವವಾದಿ ನಿಲುಮೆಗೆ ತಕ್ಕುದ್ದಾಗಿದೆ ಎಂದು ಅಭಿಪ್ರಾಯ ಪ್ರಕಟಿಸುತ್ತಿದ್ದಾರೆ. ಇದೇ ದಿ.21.1.2011 ರಂದು ದ.ಕ.ಜಿಲ್ಲಾಧಿಕಾರಿಯ ಕಛೇರಿಯ ಮುಂದೆ ಸಾರ್ವಜನಿಕ ಸಂಘ ಸಂಸ್ಥೆಗಳ ಸೇರುವಿಕೆಯಿಂದ ನಡೆಯುವ ಸಾಂಕೇತಿಕ ಪ್ರತಿಭಟನೆಯಲ್ಲಿ ಭಾಗಿಗಳಾಗಬೇಕೆಂದು ಎಲ್ಲ ಮಾನವತಾದಿಗಳಿಗೆ ನಾನು ಕಳಕಳಿಯಿಂದ ಮನವಿ ಮಾಡಿಕೊಳ್ಳುತ್ತೇನೆ. ಮತ್ತು ನನ್ನ ಆರೋಗ್ಯ ಅನುವು ಮಾಡಿಕೊಟ್ಟಲ್ಲಿ ನಾನು ಸಹಾ ಅದರಲ್ಲಿ ಭಾಗಿಯಾಗಲು ಅಪೇಕ್ಷಿಸುತ್ತೇನೆ.

Sri B.V. Kakkilaya Honoured with Karl Marx Award : Oct 2, 2010 : ಬಿ.ವಿ. ಕಕ್ಕಿಲ್ಲಾಯರಿಗೆ ಕಾರ್ಲ್ ಮಾರ್ಕ್ಸ್ ಪ್ರಶಸ್ತಿ ಪ್ರದಾನ

[dropcap]F[/dropcap]reedom fighter and veteran leader of the Communist Party of India, Sri B.V. Kakkilaya, was honoured with the Karl Marx Award for his immense contribution to the Communist movement in the country by the Indian Institute of Marxist Theory and Practice, Dharwad. The award included a citation, a plaque, Rs. 10000 in cash, books, a shawl and a peta. Sri Kakkilaya returned Rs 10000 to the Institute for continuing their good work. The cordial function was held at Sri Kakkilaya’s residence on Oct 2, 2010 and was attended by Sri K.S. Sharma and Dr. Raghavendra Rao of the Institute, Sri Subbayya Shetty, former minister, Sri PV Lokesh, Joint Secretary of Karnataka State Council of CPI and other leaders and members of the party and well wishers.

ಭಾರತ ಕಮ್ಯೂನಿಸ್ಟ್ ಪಕ್ಷದ ಹಿರಿಯ ನಾಯಕರೂ, ಸ್ವಾತಂತ್ರ್ಯ ಹೋರಾಟಗಾರರೂ ಆಗಿರುವ ಶ್ರೀ ಬಿ.ವಿ. ಕಕ್ಕಿಲ್ಲಾಯರು ಕಮ್ಯೂನಿಸ್ಟ್ ಚಳುವಳಿಗೆ ನೀಡಿದ ಅಪ್ರತಿಮ ಕೊಡುಗೆಗಾಗಿ ಧಾರವಾಡದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮಾರ್ಕ್ಸಿಟ್ ಥಿಯರಿ ಮತ್ತು ಪ್ರಾಕ್ಟೀಸ್ ಸಂಸ್ಥೆಯ ವತಿಯಿಂದ ಕಾರ್ಲ್ ಮಾರ್ಕ್ಸ್ ಪ್ರಶಸ್ತಿಯನ್ನು ನೀಡಿ ಅವರನ್ನು ಗೌರವಿಸಲಾಯಿತು. ಪ್ರಶಸ್ತಿ ಪತ್ರ, ಸ್ಮರಣಿಕೆ, ಹತ್ತು ಸಾವಿರ ರೂಪಾಯಿ, ಶಾಲು, ಪೇಟ ಹಾಗೂ ಹಲವು ಪುಸ್ತಕಗಳನ್ನು ಶ್ರೀ ಕಕ್ಕಿಲ್ಲಾಯರಿಗೆ ನೀಡಿ ಗೌರವಿಸಲಾಯಿತು. ಶ್ರೀ ಕಕ್ಕಿಲ್ಲಾಯರು ತಮಗೆ ನೀಡಲಾದ ಹತ್ತು ಸಾವಿರ ರೂಪಾಯಿಗಳನ್ನು ಸಂಸ್ಥೆಯ ಕಾರ್ಯಕ್ರಮಗಳಿಗಾಗಿ ಮರಳಿ ನೀಡಿದರು. ಶ್ರೀ ಕಕ್ಕಿಲ್ಲಾಯರ ನಿವಾಸದಲ್ಲಿ ಆಯೋಜಿಸಲಾಗಿದ್ದ ಈ ಆತ್ಮೀಯ ಸಮಾರಂಭದಲ್ಲಿ ಸಂಸ್ಥೆಯ ಹಿರಿಯರಾದ ಶ್ರೀ ಕೆ.ಎಸ್. ಶರ್ಮಾ, ಡಾ. ರಾಘವೇಂದ್ರ ರಾವ್, ಮಾಜಿ ಸಚಿವರಾದ ಶ್ರೀ ಸುಬ್ಬಯ್ಯ ಶೆಟ್ಟಿ, ಭಾರತ ಕಮ್ಯೂನಿಸ್ಟ್ ಪಕ್ಷದ ರಾಜ್ಯ ಮಂಡಲಿಯ ಜೊತೆ ಕಾರ್ಯದರ್ಶಿ ಶ್ರೀ ಪಿ.ವಿ. ಲೋಕೇಶ್ ಹಾಗೂ ಜಿಲ್ಲೆಯ ಪಕ್ಷದ ನಾಯಕರು ಹಾಗೂ ಅಭಿಮಾನಿಗಳು ಪಾಲ್ಗೊಂಡಿದ್ದರು.

Sri PV Lokesh, Sri KS Sharma, Sri B.V. Kakkilaya, Sri Subbayya Shetty and Dr Raghavendra Rao on the occasion
ಶ್ರೀಗಳಾದ ಪಿ ವಿ ಲೋಕೇಶ್, ಕೆ ಎಸ್ ಶರ್ಮಾ, ಬಿ ವಿ ಕಕ್ಕಿಲ್ಲಾಯ, ಸುಬ್ಬಯ್ಯ ಶೆಟ್ಟಿ ಹಾಗೂ ರಾಘವೇಂದ್ರ ರಾವ್

Sri KS Sharma presenting Sri Kakkilaya with books
ಶ್ರೀ ಕೆ ಎಸ್ ಶರ್ಮಾ ಅವರಿಂದ ಬಿ ವಿ ಕಕ್ಕಿಲ್ಲಾಯರಿಗೆ ಪುಸ್ತಕಗಳ ಕೊಡುಗೆ

Sri BV Kakkilaya with the shawl, peta and citation. ಶಾಲು, ಪೇಟ ಹಾಗೂ ಮಾನಪತ್ರಗಳ ಜೊತೆ ಬಿ ವಿ ಕಕ್ಕಿಲ್ಲಾಯ

BV Kakkilaya speaks on the occasion. ಬಿ ವಿ ಕಕ್ಕಿಲ್ಲಾಯರ ಪ್ರತಿಕ್ರಿಯೆ

ವಾರ್ತಾಭಾರತಿ

ಪೇಜಾವರ ಶ್ರೀಗಳವರಲ್ಲಿ ಒಂದೆರಡು ಪ್ರಶ್ನೆಗಳು

ಪೇಜಾವರ ಮಠಾಧೀಶರ ಅಸ್ಪೃಶ್ಯತಾ ನಿರ್ಮೂಲನ ಯೋಜನೆಯ ಬಗ್ಗೆ ಬಹಿರಂಗ ಪತ್ರ (ದಿನಾಂಕ ಸೆಪ್ಟೆಂಬರ್ 29, 2010)

[dropcap]ವಿ[/dropcap]ಶ್ವ ಹಿಂದು ಪರಿಷತ್ತಿನ ಸಂಸ್ಥಾಪಕ, ವರಿಷ್ಠ ನಾಯಕ ಹಾಗೂ ‘ಹಿಂದುಗಳು ಎಲ್ಲಾ ಒಂದು’ ಎಂದು ಪ್ರತಿಪಾದಿಸುತ್ತಿರುವ ಉಡುಪಿ ಅಷ್ಠ ಮಠಗಳಲ್ಲೊಂದಾದ  ಪೇಜಾವರ ಶ್ರೀಗಳವರಲ್ಲಿ ನನ್ನ ಒಂದೆರಡು ಪ್ರಶ್ನೆಗಳು.

ಶ್ರೀಗಳು ದೀಕ್ಷೆ ಮತ್ತು ಪೇಜಾವರ ಮಠದ ಅಧಿಕಾರ ವಹಿಸಿಕೊಂಡ ಸಮಯದಿಂದಲೇ ನನಗೆ ಪರಿಚಯ ಉಳ್ಳವರಾಗಿದ್ದಾರೆ.  ಎಷ್ಟೋ ಬಾರಿ ನಮ್ಮ ಹಿರಿಯರ ಮನೆಯಲ್ಲಿ ಪಾದ ಪೂಜೆ ಮಾಡಿಸಿ ಕೊಂಡಿದ್ದಾರೆ.  ಆಗ ಅವರು ಬಾಲ ಯತಿಗಳಾಗಿದ್ದರು. ಅಂದರೆ ಕಾನೂನು ಪ್ರಕಾರ ಅಪ್ರಾಪ್ತ ವಯಸ್ಕರಾಗಿದ್ದರು. ಬಿಂದ್ರನ್ ವಾಲೆಯ ಖಲಿಸ್ಥಾನ ಬೇಡಿಕೆಯನ್ನೂ,  ಭಾರತದ ಸಂವಿಧಾನಕ್ಕಿಂತಲೂ ಧರ್ಮವು ಶ್ರೇಷ್ಠ ಮತ್ತು ಮತ ಧರ್ಮಗಳ ಮೇಲೆ ಸಂವಿಧಾನವು ನಿಯಂತ್ರಣ ಹೊಂದಲಾಗದು ಎಂಬ ಅವನ ಪರಿಕಲ್ಪನೆಯನ್ನೂ ಶ್ರೀಗಳು  ಪ್ರೋತ್ಸಾಹಿಸಿ ಸಮರ್ಥಿಸಿ ಅಮೃತ್ ಸರದಲ್ಲಿ ಬಹಿರಂಗ ಭಾಷಣ ಮಾಡಿದ್ದುದ್ದನ್ನು ಪತ್ರಿಕೆಗಳಲ್ಲಿ ಓದಿದ ಬಳಿಕ ನಾವು ಅವರನ್ನು ದೂರವಿಟ್ಟೆವು.

ಭಾರತದ ಮತ ಧರ್ಮ ನಿರಪೇಕ್ಷೆ,  ಜಾತಿ ಬೇಧ ರಹಿತ ಚಾತುರ್ವರ್ಣದ ಕಟ್ಟು ಪಾಡು ಇಲ್ಲದ ಹಾಗೂ ಅಸ್ಪೃಶ್ಯತೆ, ದಲಿತ ಶೋಷಣೆ-ಮರ್ದನ ಇತ್ಯಾದಿಗಳಿಗೆ ಅವಕಾಶ ಇಲ್ಲದೆ ಮಾನವರಾಗಿ ಬಾಳುವ ಅವಕಾಶ ಇದೆ ಎಂಬುವುದನ್ನು ಶ್ರೀ ಗಳು ಒಪ್ಪಲಿ ಬಿಡಲಿ,  ಈ ದೇಶದ ಸರ್ವ ಧರ್ಮಿಯರೂ ಎಲ್ಲ ಜಾತಿಗಳವರೂ ಮೇಲು ಕೀಳು ಎಂಬ ಭಾವನೆ ಇಲ್ಲದೆ ಸರ್ವ ಸಮಾನತೆ ಯಲ್ಲಿ ಬಾಳುತ್ತಿರುವುದನ್ನು ನಾವು ಬೆಂಬಲಿಸುತ್ತೇವೆ. ಅದಕ್ಕೆ ಶ್ರೀಗಳಂಥವರ ಪಾದ ಯಾತ್ರೆ ಬೇಕಾಗಿಲ್ಲ. ಕೀಳು ಜಾತಿ ಮತ್ತು ದಲಿತರು ಎಂಬ ಶತಮಾನಗಳ ತುಳಿತಕ್ಕೆ ಒಳಗಾದವರಲ್ಲಿ ಒಬ್ಬನ ಸನ್ಯಾಸ ಸ್ವೀಕಾರವೋ, ಮೇಲ್ಜಾತಿಯವರ ಜೊತೆಗೆ ಸಹಭೋಜನವೂ ಅದಕ್ಕೆ ಪರಿಹಾರವಲ್ಲ.

ಕುವೆಂಪು ರವರ ಒಂದು ಕವನವನ್ನು ಶ್ರೀಗಳ ಅವಗಾಹನೆಗೆ ತರಬಯಸುತ್ತೇನೆ:

“ವಿಜಯ ನಗರ ಸಾಮ್ರಾಜ್ಯ ವಾದರೇನು? ಮೊಗಲರಾಳ್ವಿಕೆಯಾದರೇನು? ಬ್ರಿಟಿಷರ ಆಡಳಿತವೇನು? ನಮ್ಮವರ ಕಬ್ಬಿಣದ ಸಲಾಖೆಯ ತಿವಿತ ಹೂ ಗೊಂಚಲೇನು?”

ಶ್ರೀ ಕೃಷ್ಣನು ಬೋಧಿಸಿರುವ, ಶ್ರೀಗಳು ಸಮರ್ಥಿಸುವ ಚಾತುರ್ವರ್ಣ ಶ್ರೇಣಿ ಪದ್ದತಿಯಿಂದ ದಲಿತ ಸಮುದಾಯವು ದಮನ, ತುಳಿತ ಮತ್ತು ತಿವಿತಗಳಿಂದ ಘಾಸಿ ಗೊಂಡಿರುವುದು ನಿಜವಲ್ಲವೇನು? ನಿಜವಾದರೆ ನಿರ್ಮೂಲನೆ ಮಾಡಲು ಶ್ರೀಗಳು ಇನ್ನಾದರೂ ಸನ್ನದ್ಧರಾಗುವರೇ? ಮಠದಲ್ಲಿ ಮಾಡಲಾಗುವ ಶ್ರೀಕೃಷ್ಣನ ಭೋಧನೆಯ ಪ್ರವಚನ ..” ಚಾತುರ್ವಣ್ಯಂ ಮಯಾ ಶ್ರೇಷ್ಠ ಗುಣಕರ್ಮ ವಿಭಾಗಶಃ” ಎಂಬ ದುರ್ಗುಣಗಳ ಭೋಧನೆಗಳನ್ನು ಕೈ ಬಿಟ್ಟು “ಸಹನಾ ವವತು, ಸಹನೌ ಭುನಕ್ತು, ಸಹ ವೀರ್ಯಂ ಕರವಾವಹೈ, ತೇಜಸ್ವೀ ನಾವದೀತ ಮಸ್ತು ಮಾ  ಒಂ ಶಾಂತಿಃ, ಶಾಂತಿಃ, ಶಾಂತಿಃ ..   ಎಂದರೆ ಎಲ್ಲರೂ ಜೊತೆಗೂಡಿ ನಡೆಯೋಣ, ಜೊತೆಗೂಡಿ ದುಡಿಯೋಣ, ಜೊತೆಗೂಡಿ ಉಂಡು ಜೊತೆಗೂಡಿ ಬಾಳೋಣ, ವಿದ್ವೇಶ ಸಲ್ಲದು, ಎಲ್ಲರೂ ತೇಜಸ್ವಿಗಳಾಗೋಣ, ವಿಶ್ವದಲ್ಲೆಡೆ ಶಾಂತಿ ನೆಲೆಗೊಳ್ಳಲಿ ಎಂದು ಸರ್ವರಿಗೂ ಸಮಾನತೆಯನ್ನು ಭೋಧಿಸುವ ಸರ್ವ ಶ್ರೇಷ್ಠ ಭೋಧನೆ ಗಳು ಉಳ್ಳ ಮಂತ್ರಗಳನ್ನು ಭೋಧಿಸಿ ಆಚರಿಸಲು ಶ್ರೀಗಳು ಒಪ್ಪುವರೇ?

ನಾನು ತಿಳಿದಂತೆ ಒಬ್ಬ ಸಜ್ಜನನಿಗೆ 4 ಧರ್ಮಗಳು ನಮ್ಮ ಶಾಸ್ತ್ರಗಳಲ್ಲಿ ಉಲ್ಲೇಖವಾಗಿವೆ. ಅವುಗಳೆಂದರೆ ಧರ್ಮ, ಅರ್ಥ, ಕಾಮ ಮತ್ತು ಮೋಕ್ಷ.

1ನೇಯದ್ದು ಧರ್ಮ – ಇಲ್ಲಿ ಧರ್ಮವೆಂದರೆ ಸನಾತನ ಧರ್ಮ. ನಮ್ಮ ಸಂವಿಧಾನದ್ದು ಮತ ಧರ್ಮ ನಿರಪೇಕ್ಷಣೀಯ ಬದುಕು.

2ನೇಯದ್ದು ಅರ್ಥ – ಅಂದರೆ ದುಡಿದು ಶೋಷಣೆಗೆ ಎಡೆಕೊಡದೆ ಅರ್ಥವನ್ನು ಸಂಪಾದಿಸಿ ಅದರ ಸದ್ವಿನಿಯೋಗ ಮಾಡುವ ಆರ್ಥಿಕತೆ,

3ನೇಯದ್ದು ಸಂತಾನ – ಅಂದರೆ ಸಮಾಜಗಳ ಅಭಿವೃದ್ಧಿಯ ಮಾರ್ಗವನ್ನು ಅನುಸರಿಸುವುದು.

4ನೇಯದ್ದು ಪುನರ್ಜನ್ಮ – ಅಂದರೆ ಸಂಸಾರ ಎಲ್ಲವುಗಳಿಂದಲೂ ಬಿಡುಗಡೆಗೊಂಡು ಚಿರ ಶಾಂತಿ ಸಾಧಿಸುವುದು.

ಶ್ರೀಗಳಾಗಲಿ, ಈಗೀಗ ಅವತರಿಸುತ್ತಿರುವ ನಾನಾ ಸನ್ಯಾಸಿಗಳಾಗಲಿ ಧರ್ಮ ಎಂದರೆ ಸನಾತನ ಧರ್ಮ ಪಾಲಿಸುವುದರ ಜೊತೆಗೆ ಮೋಕ್ಷವನ್ನು ಸಾಧಿಸುವ ಕುರಿತು ಯೋಚಿಸುವುದು ಮತ್ತು ಭೋಧಿಸುವುದು ಮಾತ್ರವಾಗಿದೆ. ಉಳಿದೆರಡನ್ನು ಅಂದರೆ ಅರ್ಥ ಮತ್ತು ಕಾಮಗಳನ್ನು ನಿಷೇಧಿಸಲಾಗಿದೆ ಅಲ್ಲವೇ?  ನಮ್ಮ ಸನ್ಯಾಸಿಗಳಿಂದ, ಮಠಾಧಿಪತಿ, ಪೀಠಾಧಿಪತಿ, ಧರ್ಮಾಧಿಕಾರಿ, ಜಗದ್ಗುರು ಎಂಬಿತ್ಯಾದಿ ಬಿರುದಾಂಕಿತರವರಿಂದೆಲ್ಲ ಮೇಲೆ ಉಲ್ಲೇಖಿಸಿದ ಧರ್ಮ ಭೋಧನೆ ಗಳನ್ನು ನಿರೀಕ್ಷೀಸುತ್ತೇವೆ. ಇದು ಕಾರ್ಯಗತವಾದರೆ ಪಾದ ಯಾತ್ರೆ, ಸಹಯೋಗ, ಸಹಭೋಜನ .. ಇತ್ಯಾದಿಗಳು ಮಹತ್ವ ಕಳೆದುಕೊಂಡು ನೈಜ ಸಮಾನತೆ ಸ್ಥಾಪನೆಯಾಗಲು ಸಹಕಾರಿಯಾಗಬಲ್ಲವು. ಈ ಬಗ್ಗೆ ಗಂಬೀರವಾಗಿ ಚಿಂತಿಸಿ ಇದನ್ನು ಕಾರ್ಯಗತಗೊಳಿಸಲು ಶ್ರೀಗಳಲ್ಲಿ ನನ್ನ ವಿನಮ್ರ ಅರಿಕೆ.